ಮೆಗ್ಗಾನ್ ಆಸ್ಪತ್ರೆಗೆ ರೋಗಿಯನ್ನ ಬಿಟ್ಟು ಶಿಕಾರಿಪುರಕ್ಕೆ ಹೋಗುವಾಗ ನಡೀತು ದುರಂತ! ಕ್ಯಾಂಟರ್​ಗೆ ಆ್ಯಂಬುಲೆನ್ಸ್​ ಡಿಕ್ಕಿ! ನರ್ಸ್​ ವಿಶ್ವನಾಥ್ ಸಾವು!

Vishwanath died after an ambulance collided with a canter while he was on his way to Shikaripura after dropping a patient at The Meggan Hospital. ಮೆಗ್ಗಾನ್ ಆಸ್ಪತ್ರೆಗೆ ರೋಗಿಯನ್ನ ಬಿಟ್ಟು ಶಿಕಾರಿಪುರಕ್ಕೆ ಹೋಗುವಾಗ ಕ್ಯಾಂಟರ್ ​ಗೆ ಆ್ಯಂಬುಲೆನ್ಸ್​ ಡಿಕ್ಕಿ ಹೊಡೆದ ಪರಿಣಾಮ ವಿಶ್ವನಾಥ್ ಸಾವು!

ಮೆಗ್ಗಾನ್ ಆಸ್ಪತ್ರೆಗೆ ರೋಗಿಯನ್ನ ಬಿಟ್ಟು ಶಿಕಾರಿಪುರಕ್ಕೆ ಹೋಗುವಾಗ ನಡೀತು ದುರಂತ! ಕ್ಯಾಂಟರ್​ಗೆ ಆ್ಯಂಬುಲೆನ್ಸ್​ ಡಿಕ್ಕಿ!  ನರ್ಸ್​ ವಿಶ್ವನಾಥ್ ಸಾವು!

KARNATAKA NEWS/ ONLINE / Malenadu today/ Aug 13, 2023 SHIVAMOGGA NEWS 

ಶಿಕಾರಿಪುರದಲ್ಲಿ ನರ್ಸ್​ ಆಗಿ ಕಾರ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬರು, ರೋಗಿಯೊಬ್ಬರನ್ನ ಶಿವಮೊಗ್ಗ ಆಸ್ಪತ್ರೆಗೆ ಬಿಟ್ಟು ಆ್ಯಂಬುಲೆನ್ಸ್​ನಲ್ಲಿ ವಾಪಸ್ ಆಗುವಾಗ ಸಂಭವಿಸಿದ ಆಕ್ಸಿಡೆಂಟ್​ನಲ್ಲಿ ಸಾವನ್ನಪ್ಪಿದ್ದಾರೆ. 

ಏನಿದು ಘಟನೆ?

ನ್ಯಾಮತಿ ತಾಲ್ಲೂಕಿನ ಶಿಕಾರಿಪುರ-ಸವಳಂಗ ರಸ್ತೆಯ ಹೊಸಜೋಗ ಬಸ್ ನಿಲ್ದಾಣದ ಬಳಿ ಶುಕ್ರವಾರ ಈ ಘಟನೆ ಸಂಭವಿಸಿದೆ. ಕ್ಯಾಂಟರ್‌ಗೆ ಹಿಂಬದಿಯಿಂದ ಆ್ಯಂಬುಲೆನ್ಸ್​ ಡಿಕ್ಕಿಯಾಗಿದ್ದು, ಘಟನೆಯಲ್ಲಿ ಸ್ಟಾಫ್ ನರ್ಸ್ ವಿಶ್ವನಾಥ ಮನಗೊಳಿ (30) ಅವರು ಮೃತಪಟ್ಟಿದ್ದಾರೆ.

ಇದನ್ನು ಸಹ ಓದಿ : 2 ಕೆಜಿ ಗಾಂಜಾ ಜೊತೆ ಹೊಸಮನೆ, ಗಾಡಿಕೊಪ್ಪ, ಸವಾರ್ ಲೈನ್ ರಸ್ತೆ , ತುಮಕೂರಿನ ಆರೋಪಿ ಅರೆಸ್ಟ್! ಗಡಿಪಾರಾದವನು ಮಾರುತ್ತಿದ್ದನಾ ಆಂಧ್ರ ಗಾಂಜಾ?

ಘಟನೆಯ ಹಿನ್ನೆಲೆ

ತೀವ್ರ ಗಂಭೀರ ಸ್ವರೂಪದಲ್ಲಿದ್ದ ರೋಗಿಯನ್ನು ಶಿಕಾರಿಪುರದಿಂದ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ವಿಶ್ವನಾಥ್​ ಆ್ಯಂಬುಲೆನ್ಸ್​ನಲ್ಲಿ ಕರೆತಂದಿದ್ದರು. ಆನಂತರ ವಾಪಸ್ ಶಿಕಾರಿಪುರಕ್ಕೆ ಸವಳಂಗ ರಸ್ತೆಯ ಮೂಲಕ ಹೋಗುವಾಗ, ಹೊಸಜೋಗ ಬಳಿ ಈ ಅಪಘಾತ ಸಂಭವಿಸಿದೆ.  

ಎಲ್ಲಿಯುವರು ವಿಶ್ವನಾಥ್ ?

ಜಮಖಂಡಿ: ಪಟ್ಟಣದ ಶ್ರೀ ಸಿದ್ದ ರಾಮೇಶ್ವರ ಬಡಾವಣೆ ವಾಸಿ ವಿಶ್ವನಾಥ್  ಶಿವಮೊಗ್ಗ ಜಿಲ್ಲೆ ಶಿಕಾರಿಪುರದ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಶುಶೂಪಕರಾಗಿ ಕೆಲಸ ಮಾಡುತ್ತಿದ್ದರು.  ಕಳೆದ ಮೂರೂವರೆ ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದರು. 

ಇದನ್ನು ಸಹ ಓದಿ: ತೀರ್ಥಹಳ್ಳಿ ವಿಹಂಗಮಧಾಮದ ಮೇಲೆ ಪೊಲೀಸ್ ರೇಡ್! ದೇಶಿ,ವಿದೇಶಿ ಮದ್ಯ, ಕೋವಿ, ಕೊಂಬು ಸೇರಿದಂತೆ ವಿವಿಧ ವಸ್ತುಗಳು ಜಪ್ತಿ! ಏನಿದು ಪ್ರಕರಣ!?

ಇನ್ನಿಬ್ಬರಿಗೆ ಗಾಯ

ಘಟನೆಯಲ್ಲಿ ಕ್ಯಾಂಟರ್​  ರಭಸವಾಗಿ ಡಿಕ್ಕಿ ಹೊಡೆದಿದ್ದರಿಂದ ಆ್ಯಂಬುಲೆನ್ಸ್​ನಲ್ಲಿದ್ದ ವಿಶ್ವನಾಥ ಮನಗೊಳಿ ಸ್ಥಳದಲ್ಲೇ ಮೃತಪಟ್ಟಿ ದ್ದಾರೆ. ಆ್ಯಂಬುಲೆನ್ಸ್​ ಮತ್ತು ಕ್ಯಾಂಟರ್ ಲಾರಿ ಚಾಲಕರಿಗೆ ಗಾಯಗಳಾಗಿದ್ದು, ಇಬ್ಬರಿಗೂ ಶಿವಮೊಗ್ಗ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಇನ್ನಷ್ಟು ಸುದ್ದಿಗಳು


 ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸ ಬಯಸಿರುವ  ಕಾಂಗ್ರೆಸ್​ ಪಕ್ಷದ ಆಕಾಂಕ್ಷಿ  ನಂಜೇಶ್ ಬೆಣ್ಣೂರು