ರಾಗಿಗುಡ್ಡದಲ್ಲಿ ನಡೆದ ವಿಚಾರದ ಬಗ್ಗೆ ಎಸ್​ಪಿ ಮಿಥುನ್ ಕುಮಾರ್ ಹೇಳಿದ್ದೇನು?

Malenadu Today

KARNATAKA NEWS/ ONLINE / Malenadu today/ Oct 1, 2023 SHIVAMOGGA NEWS’ 

ಶಿವಮೊಗ್ಗ ನಗರ ರಾಗಿಗುಡ್ಡದ ಬಳಿ ಇರುವ ಚಾನಲ್​ ಸಮೀಪ ಹಾಕಲಾಗಿದ್ದ ಪ್ಲೆಕ್ಸ್​ ವಿಚಾರವಾಗಿ ಸ್ಥಳದಲ್ಲಿ ಕೆಲಕಾಲ ಗೊಂದಲ ಉಂಟಾಗಿತ್ತು. ವಿಚಾರ ತಿಳಿಯುತ್ತಲೇ ಸ್ಥಳಕ್ಕೆ ಭೇಟಿಕೊಟ್ಟ ಎಸ್​ಪಿ ಮಿಥುನ್ ಕುಮಾರ್, ಮುಖಂಡರ ಮನವೊಲಿಸಿ ಗೊಂದಲ ಬಗೆಹರಿಸಿದ್ದಾರೆ 

ರಾಗಿಗುಡ್ಡದ ಚಾನಲ್ ಬಳಿಯಲ್ಲಿ ಹಾಕಲಾಗಿದ್ದ ಫ್ಲೆಕ್ಸ್​ವೊಂದರ ಒಂದು ಭಾಗಕ್ಕೆ ಬಿಳಿ ಬಣ್ಣವನ್ನು ಬಳಿಯಲಾಗಿತ್ತು. ಇದನ್ನ ವಿರೋಧಿಸಿ ರಾಗಿಗುಡ್ಡದ ಮುಸ್ಲಿಮರು ಪ್ರತಿಭಟನೆ ನಡೆಸಿದರು. ರಸ್ತೆ ತಡೆ ನಡೆಸಿದರು.

ಇನ್ನೂ ವಿಚಾರ ತಿಳಿದು ಸ್ಥಳಕ್ಕೆ ಬಂದ ಎಸ್​ಪಿ ಮಿಥುನ್ ಕುಮಾರ್ ಮುಖಂಡರ ಜೊತೆ ಮಾತನಾಡಿದ್ದಾರೆ, ಫ್ಲೆಕ್ಸ್​ ನಲ್ಲಿ ಆಗಿದ್ದ ಗೊಂದಲವನ್ನು ಬಗೆಹರಿಸಿದ ಅವರು, ಯಾವುದೇ ವದಂತಿಗೆ ಕಿವಿಗೊಡಬೇಡಿ, ಅದ್ದೂರಿಯಾಗಿ ಈದ್ ಮಿಲಾದ್ ನಡೆಯಲು ಬೇಕಾಗಿರುವ ಅವಶ್ಯಕ ಸಿಬ್ಬಂದಿ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ. ರಾಗಿಗುಡ್ಡದಲ್ಲಿ ಪರಿಸ್ಥಿತಿ ಶಾಂತವಾಗಿದೆ , ಯಾವುದೇ ಸಮಸ್ಯೆಗಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 


ಇನ್ನಷ್ಟು ಸುದ್ದಿಗಳು 

  1. ರಾಷ್ಟ್ರೀಯ ಹೆದ್ದಾರಿ 169 A ನಲ್ಲಿ ಬೆಳಗಿನ ಜಾವ ಧಗಧಗ ಹೊತ್ತಿ ಉರಿದ ಮರ! ಏನಿದು ಘಟನೆ

  2. ವಿಐಎಸ್​ಎಲ್​​ ಆವರಣದಲ್ಲಿ ಕಾಣಿಸಿಕೊಳ್ತು ಮತ್ತೊಂದು ಚಿರತೆ!

  3. ಸಿಗಂದೂರು ಚೌಡೇಶ್ವರಿ ದರ್ಶನ ಪಡೆದು ಬೆಂಗಳೂರಿಗೆ ಹೋಗುತ್ತಿದ್ದಾಗ ಶಾಕ್! ಸೂಡೂರು ಸಮೀಪ ಆಕ್ಸಿಡೆಂಟ್!


 

Share This Article