ಮಾಜಿ ಸಿಎಂ ಬಿಎಸ್​ವೈರಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ನಡೆದಿದ್ದೇನು? ಲಾಸ್ಟ್ ಮೂಮೆಂಟ್​ನಲ್ಲಿ ನಡೆದ ಆ ಘಟನೆಗೆ ಕಾರಣವಾಗಿದ್ದೇನು? ವಿವರ ಇಲ್ಲಿದೆ

What happened during the landing of former CM BSY's helicopter? What caused that incident in the Last Moment? Here's the details

ಇವತ್ತು ಕಲಬುರಗಿಗೆ ತೆರಳಿದ್ದ ಬಿಎಸ್​ ಯಡಿಯೂರಪ್ಪನವರ ಹೆಲಿಕಾಪ್ಟರ್​ ಲ್ಯಾಂಡಿಂಗ್​ ವೇಳೆ ಅದರ ಪೈಲೆಟ್ ಇದ್ದಕ್ಕಿದ್ದಂತೆ ಹೆಲಿಕಾಪ್ಟರ್​ನ್ನ ಪುನಃ ಆಗಸದೆತ್ತರಕ್ಕೆ ಹಾರಿಸಿದರು. ಇದು ಕೆಲಕಾಲ ಆತಂಕ ಮೂಡಿಸಿತ್ತು. ಇಷ್ಟಕ್ಕೂ ಅಲ್ಲಿ ನಡೆದಿದ್ದೇನು ಎಂಬುದನ್ನ ನೋಡಿದಾಗ, ಅಲ್ಲಿದ್ದ ಪ್ಲಾಸ್ಟಿಕ್​ಗಳು, ಇವತ್ತು ಹೆಲಿಕಾಪ್ಟರ್​ ಕ್ರಾಶ್​ಗೂ ಕಾರಣವಾಗುವ ಆತಂಕವಿತ್ತು. ಆದರೆ ಅಷ್ಟರಲ್ಲಿ ಎಚ್ಚೆತ್ತುಕೊಂಡ ಪೈಲೆಟ್ , ಹೆಲಿಕಾಪ್ಟರ್ ಲ್ಯಾಂಡಿಂಗ್​ ಮಾಡುವ ಬದಲು, ಪುನಃ ಆಗಸದೆತ್ತರಕ್ಕೆ ಹಾರಿದರು. ಬಳಿಕ ಕೆಲಕ್ಷಣಗಳ ನಂತರ ಪುನಃ ಬಂದು ಲ್ಯಾಂಡ್ ಮಾಡಿದರು. 

READ | ಅಪ್ಪ, ಮಗ, ಹೆಂಡ್ತಿ ಯಾರೇ ತಪ್ಪು ಮಾಡಿರಲಿ ಶಿಕ್ಷೆಯಾಗುತ್ತೆ! ಬಿಡ್ತಾರೇನ್ರಿ! ಗೃಹಸಚಿವರ ಮಹತ್ವದ ಹೇಳಿಕೆ! ಕಾಂಗ್ರೆಸ್​ ಬಂದ್ ಗೆ ನಕ್ಕ ಆರಗ ಜ್ಞಾನೆಂದ್ರ

ಬಳಿಕ ಮಾತನಾಡಿದ ಪೈಲೆಟ್ ಜೋಸೆಪ್​, ನಿಮ್ಮ ಕ್ಯಾಮರಾದಲ್ಲಿ ರೆಕಾರ್ಡ್ ಆಗಿರುವ ಹಾಗೆ, ಹೆಲಿಕಾಪ್ಟರ್​ ಲ್ಯಾಂಡ್​ ಮಾಡುವ ಸಂದರ್ಭದಲ್ಲಿ ಪೇಪರ್​, ಪ್ಲಾಸ್ಟಿಕ್​ಗಳೆಲ್ಲಾ ಹಾರಿ ಬಂದವು. ಅದರಿಂದ ಅಪಾಯವಾಗುವ ಸಾಧ್ಯತೆ ಇತ್ತು. ಹೀಗಾಗಿ ಆ ಕ್ಷಣದಲ್ಲಿ ನಾನು ಸೂಕ್ತ ನಿರ್ಧಾರವನ್ನು ಕೈಗೊಂಡು ಹೆಲಿಕಾಪ್ಟರ್​ನ್ನ ಮತ್ತೆ ಆಗಸದೆತ್ತರಕ್ಕೆ ಹಾರಿಸಿ, ಮತ್ತೊಮ್ಮೆ ಸುತ್ತಿಕೊಂಡು ಬಂದು ಲ್ಯಾಂಡ್ ಮಾಡಬೇಕಾಯ್ತು ಎಂದಿದ್ದಾರೆ. 

READ | ಬಾಳೆಬರೆ ಘಾಟಿ ಬಂದ್​ ಆದಾಗಿನಿಂದ ಬಸ್​ಗೆ ಬರ! ಮಕ್ಕಳ ಎಕ್ಸಾಮ್​ ಟೈಂನಲ್ಲಿಯಾದ್ರೂ ಬಸ್​ ವ್ಯವಸ್ಥೆ ಮಾಡಿ! ಹೊಸನಗರದ ಜನರ ಬೇಡಿಕೆಗೆ ಸ್ಪಂದಿಸುತ್ತಾ ಆಡಳಿತ ವ್ಯವಸ್ಥೆ

ಇನ್ನೂ ಸಾಮಾನ್ಯವಾಗಿ ಹೆಲಿಕಾಪ್ಟರ್​ಗಳನ್ನು ಲ್ಯಾಂಡ್ ಮಾಡುವ ಸಲುವಾಗಿ ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತ ಮೊದಲೇ ಸೂಕ್ತ ವ್ಯವಸ್ಥೆ ಮಾಡಿರುತ್ತದೆ. ಆದರೆ ಕಲಬುರಗಿಯಲ್ಲಿ ತಾತ್ಕಾಲಿಕವಾಗಿ ನಿರ್ಮಿಸಿದ್ದ ಹೆಲಿಪ್ಯಾಡ್​ ನಲ್ಲಿ ಕಂಡಲೆಲ್ಲಾ ಟಾರ್ಪಲ್​ಗಳಿದ್ದವು. ಅದಕ್ಕಿಂತ ಹೆಚ್ಚಾಗಿ ರಾಶಿ ರಾಶಿ ಪೇಪರ್​ ಹಾಗೂ ಪ್ಲಾಸ್ಟಿಕ್ ಕಸಗಳು ತುಂಬಿದ್ದವು. ಇಷ್ಟೊಂದು ಅವ್ಯವಸ್ಥೆಯಾಗಿದ್ದ ಪ್ಲೇಸ್​ನಲ್ಲಿ ಹೆಲಿಕಾಪ್ಟರ್ ಲ್ಯಾಂಡ್ ಮಾಡಲು ಸಾಧ್ಯವಾಗಲಿಲ್ಲ. ಬಳಿಕ ಪೊಲೀಸರೇ ಸಿಕ್ಕಸಿಕ್ಕ ಕಸ ಆರಿಸಿ, ಹೆಲಿಕಾಪ್ಟರ್​ ಲ್ಯಾಂಡಿಂಗ್​ಗೆ ಅನುಕೂಲ ಮಾಡಿಕೊಟ್ಟರು. ಆದರೆ, ಅವ್ಯವಸ್ಥೆಯನ್ನು ಹಾಗೆ ಇಟ್ಟು ನಿರ್ಲಕ್ಷ್ಯವಹಿಸಿದವರು ಯಾರು ಎಂಬುದು ಇನ್ನಷ್ಟೆ ಗೊತ್ತಾಗಬೇಕಿದೆ. 

READ |BREAKING NEWS : ಶಿವಮೊಗ್ಗದಲ್ಲಿ ಮತ್ತಿಬ್ಬರ ಮೇಲೆ ಗೂಂಡಾ ಕಾಯ್ದೆ (gunda act) ಜಾರಿ! ವರ್ಷವಿಡಿ ಜೈಲು ಗ್ಯಾರಂಟಿ!