ಮಾಜಿ ಸಿಎಂ ಬಿಎಸ್ವೈರಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ನಡೆದಿದ್ದೇನು? ಲಾಸ್ಟ್ ಮೂಮೆಂಟ್ನಲ್ಲಿ ನಡೆದ ಆ ಘಟನೆಗೆ ಕಾರಣವಾಗಿದ್ದೇನು? ವಿವರ ಇಲ್ಲಿದೆ
What happened during the landing of former CM BSY's helicopter? What caused that incident in the Last Moment? Here's the details
ಇವತ್ತು ಕಲಬುರಗಿಗೆ ತೆರಳಿದ್ದ ಬಿಎಸ್ ಯಡಿಯೂರಪ್ಪನವರ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಅದರ ಪೈಲೆಟ್ ಇದ್ದಕ್ಕಿದ್ದಂತೆ ಹೆಲಿಕಾಪ್ಟರ್ನ್ನ ಪುನಃ ಆಗಸದೆತ್ತರಕ್ಕೆ ಹಾರಿಸಿದರು. ಇದು ಕೆಲಕಾಲ ಆತಂಕ ಮೂಡಿಸಿತ್ತು. ಇಷ್ಟಕ್ಕೂ ಅಲ್ಲಿ ನಡೆದಿದ್ದೇನು ಎಂಬುದನ್ನ ನೋಡಿದಾಗ, ಅಲ್ಲಿದ್ದ ಪ್ಲಾಸ್ಟಿಕ್ಗಳು, ಇವತ್ತು ಹೆಲಿಕಾಪ್ಟರ್ ಕ್ರಾಶ್ಗೂ ಕಾರಣವಾಗುವ ಆತಂಕವಿತ್ತು. ಆದರೆ ಅಷ್ಟರಲ್ಲಿ ಎಚ್ಚೆತ್ತುಕೊಂಡ ಪೈಲೆಟ್ , ಹೆಲಿಕಾಪ್ಟರ್ ಲ್ಯಾಂಡಿಂಗ್ ಮಾಡುವ ಬದಲು, ಪುನಃ ಆಗಸದೆತ್ತರಕ್ಕೆ ಹಾರಿದರು. ಬಳಿಕ ಕೆಲಕ್ಷಣಗಳ ನಂತರ ಪುನಃ ಬಂದು ಲ್ಯಾಂಡ್ ಮಾಡಿದರು.
ಬಳಿಕ ಮಾತನಾಡಿದ ಪೈಲೆಟ್ ಜೋಸೆಪ್, ನಿಮ್ಮ ಕ್ಯಾಮರಾದಲ್ಲಿ ರೆಕಾರ್ಡ್ ಆಗಿರುವ ಹಾಗೆ, ಹೆಲಿಕಾಪ್ಟರ್ ಲ್ಯಾಂಡ್ ಮಾಡುವ ಸಂದರ್ಭದಲ್ಲಿ ಪೇಪರ್, ಪ್ಲಾಸ್ಟಿಕ್ಗಳೆಲ್ಲಾ ಹಾರಿ ಬಂದವು. ಅದರಿಂದ ಅಪಾಯವಾಗುವ ಸಾಧ್ಯತೆ ಇತ್ತು. ಹೀಗಾಗಿ ಆ ಕ್ಷಣದಲ್ಲಿ ನಾನು ಸೂಕ್ತ ನಿರ್ಧಾರವನ್ನು ಕೈಗೊಂಡು ಹೆಲಿಕಾಪ್ಟರ್ನ್ನ ಮತ್ತೆ ಆಗಸದೆತ್ತರಕ್ಕೆ ಹಾರಿಸಿ, ಮತ್ತೊಮ್ಮೆ ಸುತ್ತಿಕೊಂಡು ಬಂದು ಲ್ಯಾಂಡ್ ಮಾಡಬೇಕಾಯ್ತು ಎಂದಿದ್ದಾರೆ.
ಇನ್ನೂ ಸಾಮಾನ್ಯವಾಗಿ ಹೆಲಿಕಾಪ್ಟರ್ಗಳನ್ನು ಲ್ಯಾಂಡ್ ಮಾಡುವ ಸಲುವಾಗಿ ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತ ಮೊದಲೇ ಸೂಕ್ತ ವ್ಯವಸ್ಥೆ ಮಾಡಿರುತ್ತದೆ. ಆದರೆ ಕಲಬುರಗಿಯಲ್ಲಿ ತಾತ್ಕಾಲಿಕವಾಗಿ ನಿರ್ಮಿಸಿದ್ದ ಹೆಲಿಪ್ಯಾಡ್ ನಲ್ಲಿ ಕಂಡಲೆಲ್ಲಾ ಟಾರ್ಪಲ್ಗಳಿದ್ದವು. ಅದಕ್ಕಿಂತ ಹೆಚ್ಚಾಗಿ ರಾಶಿ ರಾಶಿ ಪೇಪರ್ ಹಾಗೂ ಪ್ಲಾಸ್ಟಿಕ್ ಕಸಗಳು ತುಂಬಿದ್ದವು. ಇಷ್ಟೊಂದು ಅವ್ಯವಸ್ಥೆಯಾಗಿದ್ದ ಪ್ಲೇಸ್ನಲ್ಲಿ ಹೆಲಿಕಾಪ್ಟರ್ ಲ್ಯಾಂಡ್ ಮಾಡಲು ಸಾಧ್ಯವಾಗಲಿಲ್ಲ. ಬಳಿಕ ಪೊಲೀಸರೇ ಸಿಕ್ಕಸಿಕ್ಕ ಕಸ ಆರಿಸಿ, ಹೆಲಿಕಾಪ್ಟರ್ ಲ್ಯಾಂಡಿಂಗ್ಗೆ ಅನುಕೂಲ ಮಾಡಿಕೊಟ್ಟರು. ಆದರೆ, ಅವ್ಯವಸ್ಥೆಯನ್ನು ಹಾಗೆ ಇಟ್ಟು ನಿರ್ಲಕ್ಷ್ಯವಹಿಸಿದವರು ಯಾರು ಎಂಬುದು ಇನ್ನಷ್ಟೆ ಗೊತ್ತಾಗಬೇಕಿದೆ.
READ |BREAKING NEWS : ಶಿವಮೊಗ್ಗದಲ್ಲಿ ಮತ್ತಿಬ್ಬರ ಮೇಲೆ ಗೂಂಡಾ ಕಾಯ್ದೆ (gunda act) ಜಾರಿ! ವರ್ಷವಿಡಿ ಜೈಲು ಗ್ಯಾರಂಟಿ!
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com
HASHTAGS : #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynews #firstnewsshivamogga #