ಮೋದಿ ಮುಂದೆ ಸಿದ್ದರಾಮಯ್ಯ ಯಾರು? ದಲಿತ ಮತದಾರರು ಸಿದ್ದರಾಮಯ್ಯರನ್ನು ಸೋಲಿಸಲು ಕಾಯುತ್ತಿದ್ದಾರೆ/ ಕೆ.ಎಸ್.ಈಶ್ವರಪ್ಪ
Who is Siddaramaiah in front of Modi? Dalit voters are waiting to defeat Siddaramaiah/ KS Eshwarappa
![ಮೋದಿ ಮುಂದೆ ಸಿದ್ದರಾಮಯ್ಯ ಯಾರು? ದಲಿತ ಮತದಾರರು ಸಿದ್ದರಾಮಯ್ಯರನ್ನು ಸೋಲಿಸಲು ಕಾಯುತ್ತಿದ್ದಾರೆ/ ಕೆ.ಎಸ್.ಈಶ್ವರಪ್ಪ](https://malenadutoday.com/uploads/images/202303/image_750x_64157ecd512a4.jpg)
MALENADUTODAY.COM |SHIVAMOGGA| #KANNADANEWSWEB
ಮಾಜಿ ಸಿಎಂ ಸಿದ್ದರಾಮಯ್ಯರವರ ಚುನಾವಣಾ ಕಣದ ಬಗ್ಗೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪನವರು ಪ್ರತಿಕ್ರಿಯಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಯಾವ ಕಾರಣಕ್ಕೂ ಕೋಲಾರದಿಂದ ಸ್ಪರ್ಧೆ ಮಾಡುವುದಿಲ್ಲ, ಏಕೆಂದರೆ ಅಲ್ಲಿ ನಿರ್ಣಾಯಕ ಮತದಾರರಾಗಿರುವ ದಲಿತ ಮತದಾರರು ಸಿದ್ದರಾಮಯ್ಯರನ್ನು ಸೋಲಿಸಲು ಕಾಯುತ್ತಿದ್ದಾರೆ. ಸಿದ್ದರಾಮಯ್ಯ ಈ ಹಿಂದೆ ಮುನಿಯಪ್ಪ ಹಾಗೂ ಪರಮೇಶ್ವರ್ ಸೋಲಿಸಿದ್ದನ್ನು ದಲಿತರು ಮರೆತಿಲ್ಲ. ಇದರ ಜೊತೆಗೆ ಒಕ್ಕಲಿಗ, ಕುರುಬ ಮತದಾರರ ಮತವೂ ಅವರಿಗೆ ಸಿಗುವುದಿಲ್ಲ ಎಂದರು.
ಇನ್ನೂ ಮಾರ್ಚ್ 25 ರಂದು ಮೋದಿ ದಾವಣಗೆರೆಗೆ ಆಗಮಿಸುತ್ತಿದ್ದಾರೆ. ನಾಲ್ಕು ಕಡೆಯಿಂದ ಬರಲಿರುವ ವಿಜಯ ಸಂಕಲ್ಪ ಯಾತ್ರೆ ದಾವಣಗೆರೆಯಲ್ಲಿ ಸೇರಲಿದ್ದು ಬೃಹತ್ ಸಮಾವೇಶ ನಡೆಯಲಿದೆ ಎಂಧು ಮಾಹಿತಿ ನೀಡಿದ ಕೆ.ಎಸ್. ಈಶ್ವರಪ್ಪನವರು, ಪ್ರಧಾನಿ ನರೇಂದ್ರ ಮೋದಿ ಮುಂದೆ ಸಿದ್ದರಾಮಯ್ಯ ಯಾರು ಎಂದು ಪ್ರಶ್ನೆ ಮಾಡಿದ್ದಾರೆ.
ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು ಕ್ಲಿಕ್ ಮಾಡಿ
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com
HASHTAGS| sagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today news,shivamogga latest news#Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynewsChilur