who killed bommanakatte avinash ಶಿವಮೊಗ್ಗ ರೌಡಿ ಶೀಟರ್ ಅವಿನಾಶ್ ಕೊಲೆ ಪ್ರಕರಣ: ಐವರ ಬಂಧನ, ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ
ಶಿವಮೊಗ್ಗ, ಜೂನ್ 26, 2025 (ಮಲೆನಾಡು ಟುಡೇ ಸುದ್ದಿ): ಇತ್ತೀಚೆಗೆ ಶಿವಮೊಗ್ಗ ನಗರದ ಹೊರವಲಯ ಬೊಮ್ಮನಕಟ್ಟೆ ಕೆರೆ ಏರಿ ಬಳಿ ನಡೆದಿದ್ದ ರೌಡಿ ಶೀಟರ್ ಅವಿನಾಶ್ (32) ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿನೋಬನಗರ ಸ್ಠೇಷನ್ನ ಪೊಲೀಸರು ಐವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೊಮ್ಮನಕಟ್ಟೆ ಬಡಾವಣೆಯ ನಿವಾಸಿಗಳಾದ ಪ್ರವೀಣ್ (35), ಆನಂದ್ (35), ಸುನೀಲ್ (30), ಜೀತೇಂದ್ರ (28) ಮತ್ತು ಕಿರಣ್ (34) ಬಂಧಿತ ಆರೋಪಿಗಳಾಗಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಆರೋಪಿಗಳೆಲ್ಲರೂ ಕೃಷಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದವರು. ಕೊಲೆಗೀಡಾದ ಅವಿನಾಶ್ಗೆ ಈ ಆರೋಪಿಗಳು ಸಂಬಂಧಿಕರು ಹಾಗೂ ಪರಿಚಯಸ್ಥರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
who killed bommanakatte avinash?
ಪೊಲೀಸ್ ಕಾರ್ಯಾಚರಣೆ : ಪೊಲೀಸರು ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ನ್ಯಾಯಾಲಯದ ಆದೇಶದಂತೆ, ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ಮೂರು ದಿನಗಳ ಕಾಲ ಪೊಲೀಸರು ತಮ್ಮ ವಶಕ್ಕೆ ಪಡೆದಿದ್ದಾರೆ.


ಘಟನೆ ಏನು? ಶಿವಮೊಗ್ಗ ನಗರದ ಬೊಮ್ಮನಕಟ್ಟೆ ಕೆರೆ ಏರಿ ಬಳಿ,ಅವಿನಾಶ್ (32) ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಹತ್ಯೆಗೀಡಾಗಿದ್ದ ಅವಿನಾಶ್, ಈ ಹಿಂದೆ ಒಂದು ಕೊಲೆ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿದ್ದು, ಐದು ವರ್ಷಗಳ ಕಾಲ ಜೈಲಿನಲ್ಲಿದ್ದ. ನಂತರ ಮೇಲಿನ ನ್ಯಾಯಾಲಯದಿಂದ ಜಾಮೀನು ಪಡೆದು ಹೊರಗಿದ್ದ. ಘಟನೆ ನಡೆದ ದಿನ, ಅವಿನಾಶ್ರನ್ನು ಪಾರ್ಟಿ ಮಾಡಲು ಕರೆತಂದು, ಬೊಮ್ಮನಕಟ್ಟೆಯಲ್ಲಿ ತಡರಾತ್ರಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು.
ಇನ್ನಷ್ಟು ಸುದ್ದಿಗಳಿಗಾಗಿ : malendutoday.com ಕ್ಲಿಕ್ ಮಾಡಿ
Five accused arrested by Vinobanagar police in connection with the brutal murder of rowdy sheeter Avinash (32) near Bommanakatte lake in Shivamogga. Get details on the crime, arrests, and ongoing police investigation. who killed bommanakatte avinash