ಮಲವಗೊಪ್ಪ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ: ಸೂಕ್ತ ಪರಿಹಾರಕ್ಕೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ
ಶಿವಮೊಗ್ಗ: ಮಲವಗೊಪ್ಪದಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯನ್ನು ಅಗಲೀಕರಣ ಮಾಡುವ ಸರ್ಕಾರದ ನಿರ್ಧಾರಕ್ಕೆ ಸಂಬಂಧಿಸಿದಂತೆ, ರಸ್ತೆ ಅಕ್ಕಪಕ್ಕದಲ್ಲಿರುವ ಮನೆ ಮಾಲೀಕರು ಮತ್ತು ಜಾಗದವರಿಗೆ ಸೂಕ್ತ ಪರಿಹಾರ ಒದಗಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ. ಈ ಕುರಿತು ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆದಿದೆ.

ಮಲವಗೊಪ್ಪ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ:
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕಿ ಶಾರದಾ ಪೂರ್ಯಾನಾಯ್ಕ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ರಸ್ತೆ ಪಕ್ಕದ ನಿವಾಸಿಗಳು ತಮ್ಮ ಅಹವಾಲುಗಳನ್ನು ಮಂಡಿಸಿದ್ದು, ಕಳೆದುಕೊಳ್ಳುವ ಆಸ್ತಿಪಾಸ್ತಿಗೆ ನ್ಯಾಯಯುತ ಪರಿಹಾರ, ಪುನರ್ವಸತಿ ಮತ್ತು ಪುನರ್ನಿರ್ಮಾಣಕ್ಕೆ ನೆರವು ನೀಡುವಂತೆ ಒತ್ತಾಯಿಸಿದರು. ಜಿಲ್ಲಾಧಿಕಾರಿಗಳು ಸ್ಥಳೀಯರ ಅಹವಾಲುಗಳನ್ನು ಆಲಿಸಿ, ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
Related News
🔔 Breaking News Alerts
ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್ಸ್ಕ್ರೈಬ್ ಮಾಡಿ.