ಮಲೆನಾಡು ಟುಡೆ ಸುದ್ದಿ, ಅಕ್ಟೋಬರ್ 1 2025: ಅಪರೂಪ ಎಂಬಂತಹ ಪ್ರಕರಣವೊಂದರಲ್ಲಿ ಪತ್ನಿಯೇ ತನ್ನ ಗಂಡನ ವಿರುದ್ಧ ಜಿಂಕೆ ಬೇಟೆಯಾಡಿದ ಆರೋಪ ಸಂಬಂಧ ದೂರು ನೀಡಿದ್ದಾರೆ. ಕೊಡಗು ಜಿಲ್ಲೆಯ ಸಿದ್ದಾಪುರದಲ್ಲಿ ನಡೆದ ಘಟನೆ ಇದಾಗಿದೆ. ಇಲ್ಲಿನ ದುಬಾರೆ ಮೀಸಲು ಅರಣ್ಯ ಪ್ರದೇಶದಲ್ಲಿ ಜಿಂಕೆಯೊಂದು ಬಲೆಯ ಉರುಳಿಗೆ ಸಿಲುಕಿ ಸತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಸಂಬಂದ ವಿಚಾರಣೆ ನಡೆಸಿದ ಅರಣ್ಯ ಸಿಬ್ಬಂದಿಗೆ ಜಿಂಕೆಯ ಸಾವಿಗೆ ತಮ್ಮ ಪತಿ ಬೇಟೆಗಾಗಿ ಹಾಕಿದ್ದ ಉರುಳು ಕಾರಣ ಎಂದು ಮಹಿಳೆಯೊಬ್ಬರು ಅರಣ್ಯ ಇಲಾಖೆಗೆ ದೂರು ನೀಡಿದ್ದಾರೆ. ಆಕೆ ನೀಡಿದ ದೂರಿನಂತೆ ಅರಣ್ಯ ಇಲಾಖೆಯ ಅಧಿಕಾರಿಗಲು ಸದ್ಯ ತನಿಖೆ ನಡೆಸ್ತಿದ್ದಾರೆ. ವಿಷಯ ಅಂದರೆ ತಮ್ಮ ಪತಿ ನಿಯಮಿತವಾಗಿ ಪ್ರಾಣಿಗಳನ್ನು ಬೇಟೆಯಾಡುತ್ತಾರೆ ಎಂದು ಮಹಿಳೆ ತಮ್ಮ ದೂರಿನಲ್ಲಿ ಆರೋಪ ಮಾಡಿದ್ದಾರೆ.

Wife Exposes Husband in Poaching Case
ಜಿಂಕೆ ಬೇಟೆ, ಪತಿಯಿಂದ ದೂರು, ದುಬಾರೆ ಅರಣ್ಯ, ಉರುಳು, ಅರಣ್ಯ ಇಲಾಖೆ, ಸಿದ್ಧಾಪುರ, ಕುಶಾಲನಗರ, ವನ್ಯಜೀವಿ ಅಪರಾಧ, ಗಂಡು ಜಿಂಕೆ, Deer poaching, Wildlife crime, Husband accused, Dubare forest, Snare death, Sidhapura, Forest department complaint, Kushalnagar.
ಇದನ್ನು ಸಹ ಓದಿ : ಮಧ್ಯರಾತ್ರಿ ರೂಮಿನೊಳಗೆ ಬಂದು ಮೈಕೈ ಮುಟ್ಟಿದ ಫ್ರಾಕ್ ಧರಿಸಿದ್ದ ಆಗಂತುಕ!
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ, ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook, whatsapp, whatsapp chanel , instagram, youtube, telegram , google business, malenadu today epaper, malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!