ಚಿರತೆ ಮೇಲೆ ಕಾಡು ಹಂದಿಯ ಅಟ್ಯಾಕ್! ನೀರು ಅರಸಿ ಬಂದು ಪ್ರಾಣ ಬಿಟ್ಟ ವನ್ಯಜೀವಿ!
Wild boar attack on leopard! Wildlife came in search of water and died!
KARNATAKA NEWS/ ONLINE / Malenadu today/ Jun 8, 2023 SHIVAMOGGA NEWS
ಶಿರಾಳಕೊಪ್ಪ / ಇಲ್ಲಿನ ಕೌವಲಿ ಸಮೀಪ ಚಿರತೆಯೊಂದು ಕಾಡು ಹಂದಿಯ ತಿವಿತಕ್ಕೆ ಬಲಿಯಾಗಿ ಸಾವನ್ನಪ್ಪಿದೆ. ಶಿಕಾರಿಪುರ ತಾಲೂಕಿನ ತೊಗರ್ಸಿ ಸಮೀಪದ ಕೌವಲಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ.
ನಡೆದಿದ್ದೇನು?
ಗ್ರಾಮಕ್ಕೆ ಹೊಂದಿಕೊಂಡಿರುವ ಅರಣ್ಯ ಪ್ರದೇಶದಲ್ಲಿ ಐದು ವರ್ಷದ ಚಿರತೆ ಸಾವನ್ನಪ್ಪಿರುವ ಸ್ಥಳೀಯ ರೈತರು ಗಮನಿಸಿ ಅರಣ್ಯ ಇಲಅಖೆಗೆ ತಿಳಿಸಿದ್ದಾರೆ. ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು . ಮರಣೋತ್ತರ ಪರೀಕ್ಷೆ ನಡೆಸಿ, ಕಾಡು ಹಂದಿ ಬೇಟೆಯಾಡಲು ಹೋದ ಸಂದದರ್ಭದಲ್ಲಿ ಈ ಘಟನೆ ನಡೆದಿರಬಹುದು ಎಂದಿದ್ದಾರೆ.
ಚಿರತೆಗೆ ಕಾಡು ಹಂದಿ ತಿವಿದ ಕಾರಣಕ್ಕೆ ಚಿರತೆಯ ಬೆನ್ನು ಮೂಳೆ ತುಂಡಾಗಿದ್ದು, ಆ ಗಾಯದಿಂದಲೇ ನಿತ್ರಾಣಗೊಂಡು ಸಾವನ್ನಪ್ಪಿರುವ ಸಾಧ್ಯತೆ ಇದೆ ಎಂದು ವನ್ಯಜೀವಿ ವೈದ್ಯರು ತಿಳಿಸಿದ್ದಾರೆ.
ಸಾಗರ-ತಾಳಗುಪ್ಪ ನಡುವೆ ಭೀಕರ ಬೈಕ್ ಆಕ್ಸಿಡೆಂಟ್! ಶಿರಸಿ ಮೂಲದ ಓರ್ವನ ಸಾವು!
ಸಾಗರ/ ತಾಲ್ಲೂಕಿನ ಕಾನ್ಲೆ ಕ್ರಾಸ್ ಬಳಿಯಲ್ಲಿ ಎರಡು ಬೈಕ್ಗಳ ನಡುವೆ ಡಿಕ್ಕಿ ಸಂಭವಿಸಿದೆ. ಪರಿಣಾಮ ಓರ್ವ ಸಾವನ್ನಪ್ಪಿದ್ದಾರೆ.
ಯಾರು ಸೂಡಾ ಅಧ್ಯಕ್ಷರು? ಯಾರು ಮುಂದಿನ ಕಾಂಗ್ರೆಸ್ ಜಿಲ್ಲಾಧ್ಯಕ್ಷರು? ಶಿವಮೊಗ್ಗದ ಪ್ರಮುಖ ಹುದ್ದೆಗಾಗಿ ಬೆಂಗಳೂರಿನಲ್ಲಿಯೇ ಜೋರು ಪೈಪೋಟಿ! ಟಿಕೆಟ್ ತಂತ್ರಗಾರಿಕೆ ಮತ್ತೆ ಗೆಲ್ಲುತ್ತಾ?
ಹೇಗಾಯ್ತು ಘಟನೆ
ತಾಳಗುಪ್ಪ-ಸಾಗರ ರಸ್ತೆ ನಡುವಲ್ಲಿ ನಿನ್ನೆ ಸಂಜೆ 06:50 ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಎರಡು ಬೈಕ್ಗಳು ಪರಸ್ಪರ ಡಿಕ್ಕಿಯಾಗಿದ್ದು, ಶಿರಸಿ ಮೂಲದ ಮಣಿ ಎಂಬ ಯುವಕ ಸಾವನ್ನಪ್ಪಿದ್ದಾನೆ. ಘಟನೆಯಲ್ಲಿ ಇನ್ನೊಬ್ಬ ಗಂಭೀರವಾಗಿ ಗಾಯಗೊಂಡಿದ್ಧಾನೆ. ಆತನು ಸಹ ಶಿರಸಿ ಮೂಲದ ಮಂಜುನಾಥ್ ಎನ್ನಲಾಗಿದ್ದು, ಆತನನ್ನ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೊಬ್ಬ ಬೈಕ ಸವಾರನಿಗೂ ಗಾಯಗಳಾಗಿದ್ದು, ಆತನನ್ನ ಸಾಗರ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.