HOSANAGARA

ಮಳೆ ಜೊತೆ ಬೀಸಿದ ಗಾಳಿ, ಹಾರಿ ಹೋಯಿತು ಮನೆ ಮೇಲ್ಚಾವಣಿ! ಈ ದೃಶ್ಯ ನೋಡಿ

ajjimane ganesh ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

Wind in Hosanagara / ಮಲೆನಾಡುಟುಡೆ / ಹೊಸನಗರ / ತಾಲೂಕಿನಾದ್ಯಂತ ಎಡೆಬಿಡದೇ ಮಳೆಯಾಗುತ್ತಿದೆ. ಮಳೆಯಾಗುತ್ತಿರುವುದರ ಜೊತೆಜೊತೆಗೆ ಅನಾಹುತವೂ ಸಂಭವಿಸುತ್ತಿದೆ. ಇದಕ್ಕೆ ಪೂರಕ ಎಂಬಂತೆ ಜೋರಾಗಿ ಬೀಸಿದ ಗಾಳಿಗೆ ಮನೆಯೊಂದ ಚಾವಣಿಯು ಹಾರಿ ಹೋಗಿದೆ.

ತಾಲೂಕಿನ ಅರಮನೆಕೊಪ್ಪ ಗ್ರಾಮದ ಗಣೇಶ ಉಡುಪ ಎಂಬುವವರ ವಾಸದ ಮನೆ ಚಾವಣಿ ಗಾಳಿಯ ರಭಸಕ್ಕೆ ಹಾರಿ ಹೋಗಿದೆ. ಇನ್ನು ಗಾಳಿ ಮಳೆಗೆ ಹಲವೆಡೆ ವಿದ್ಯುತ್ ಕಂಬಗಳು ತುಂಡಾಗಿದೆ.

ತಾಲೂಕಿನಲ್ಲಿ ಕಳೆದ 5 ಮಳೆಯಿಂದಾಗಿ ದಿನಗಳಿಂದ ವಿದ್ಯುತ್ ಸಮಸ್ಯೆ ಕಾಣುತ್ತಿದೆ. ಮೆಸ್ಕಾಂನಲ್ಲಿ ಸಿಬ್ಬಂದಿ ಕೊರತೆ ಇರುವುದಿಂದ ರಿಪೇರಿ ಕೆಲಸ ಲೇಟಾಗುತ್ತಿದೆ. ಆದರೆ ಮಳೆ ಗಾಳಿ ಥಂಡಿಯಲ್ಲಿ ಜನರು ಪರದಾಡುವಂತಾಗಿದೆ.

ಬೇಸಿಗೆಯಲ್ಲಿ ಜಂಗಲ್ ಕಟಿಂಗ್ ನೆಪದಲ್ಲಿ ದಿನವಿಡೀ ವಿದ್ಯುತ್ ವ್ಯತ್ಯಯ ಮಾಡುವ ಮೆಸ್ಕಾಂ ಅಧಿಕಾರಿಗಳು ಮಳೆಗಾಲದಲ್ಲಿ ಮರ ಬಿದ್ದಿದೆ, ದುರಸ್ತಿ ಆಗಬೇಕು ಎಂಬ ನೆಪ ಹೇಳುತ್ತಿದ್ದಾರೆ ಅಂತಾ ನೆಪ ಹೇಳುತ್ತಿದ್ದಾರಂತೆ

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
ಟ್ಯಾಗ್‌ಗಳು:
ajjimane ganesh

ಅಜ್ಜಮನೆ ಗಣೇಶ, ಪತ್ರಕರ್ತ, ಸಮಯ, ಟಿವಿ9, ನ್ಯೂಸ್​ ಫಸ್ಟ್​ನಲ್ಲಿ ವೃತ್ತಿ ನಿರ್ವಹಿಸಿರುವ ಅನುಭವವಿದೆ. ಗಳಿಸಿದ ಅನುಭವದ ಅನುಭಾವದ ಜೊತೆಗೆ ಮಲೆನಾಡು ಟುಡೆಯಲ್ಲಿ ಸೀನಿಯ್​ ಜರ್ನಲಿಸ್ಟ್​ ಆಗಿ ಕೆಲಸ ನಿರ್ವಹಿಸುತ್ತಿರುವೆ