SHIVAMOGGA | Dec 11, 2023 | ಶಿವಮೊಗ್ಗ ಜಿಲ್ಲೆ ಹೊಸನಗರದ ರಿಪ್ಪನ್ಪೇಟೆ ಸಮೀಪ ಗವಟೂರಿನಲ್ಲಿ ಸ್ಕೂಟಿ ಹಾಗೂ ಕಾರು ನಡುವೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಸ್ಕೂಟಿಯಲ್ಲಿದ್ದ ಮಹಿಳೆಯ ಕಾಲಿಗೆ ತೀವ್ರ ಪೆಟ್ಟಾಗಿದೆ ಎಂದು ತಿಳಿದು ಬಂದಿದೆ
ರಿಪ್ಪನ್ಪೇಟೆ ಗವಟೂರು
ಇಲ್ಲಿ ಹೊಸನಗರ ಕಡೆಯಿಂದ ಬರುತ್ತಿದ್ದ ಮಾರುತಿ ಸ್ವಿಫ್ಟ್ ಹಾಗೂ ಹಳಿಯೂರು ರಸ್ತೆಯಿಂದ ಬರುತ್ತಿದ್ದ ಸ್ಕೂಟಿ ನಡುವೆ ಡಿಕ್ಕಿಯಾಗಿದೆ. ಘಟನೆಯಲ್ಲಿ ದೊಡ್ಡಿನಕೊಪ್ಪ ಗ್ರಾಮದ ಚಂದ್ರಬಾಬು ಹಾಗೂ ಲಕ್ಷ್ಮೀ ದಂಪತಿ ಸ್ಕೂಟಿಯಲ್ಲಿ ಮುಖ್ಯ ರಸ್ತೆಗೆ ಬರುತ್ತಿದ್ದರು. ಈ ವೇಳೆ ಕಾರು ಡಿಕ್ಕಿಯಾಗಿದೆ. ಘಟನೆಯಲ್ಲಿ ಲಕ್ಷ್ಮೀಯವರ ಕಾಲಿಗೆ ಪೆಟ್ಟಾಗಿದೆ.
ರಿಪ್ಪನ್ ಪೇಟೆ ಪೊಲೀಸ್ ಸ್ಟೇಷನ್
ಇಲ್ಲಿನ ರಿಪ್ಪನ್ ಪೇಟೆ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ನಡೆದ ಘಟನೆಯಲ್ಲಿ ಸ್ಥಳೀಯರು ತಕ್ಷಣವೇ ನೆರವಿಗೆ ಬಂದು ಇಬ್ಬರನ್ನ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದಾರೆ. ಬಳಿಕ ಶಿವಮೊಗ್ಗದ ಮೆಗ್ಗಾನ್ಗೆ ಗಾಯಾಳು ಲಕ್ಷ್ಮೀಯವರನ್ನ ಶಿಫ್ಟ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಲಾರಿ ಮತ್ತು ಸರ್ಕಾರಿ ಬಸ್ ನಡುವೆ ಅಪಘಾತ! ಬೆಂಗಳೂರಿನಿಂದ ಹುಂಚಕ್ಕೆ ಬರುತ್ತಿದ್ದಾಗ ಘಟನೆ
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ನಲ್ಲಿ ಅಪಘಾತವೊಂದು ಸಂಭವಿಸಿದೆ. ಘಟನೆಯಲ್ಲಿ ಸರ್ಕಾರಿ ಬಸ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿದೆ. ಇವತ್ತು ಬೆಳಗ್ಗೆ ಈ ಗಠನೆ ನಡೆದಿದೆ.
ತೀರ್ಥಹಳ್ಳಿ ತಾಲ್ಲೂಕು
ಇಲ್ಲಿನ ಆರಗ ಸರ್ಕಲ್ನಲ್ಲಿ ಘಟನೆ ಸಂಭವಿಸಿದ್ದು ಕೆಎಸ್ಆರ್ಟಿಸಿ ಬಸ್ ಹಾಗೂ ಹತ್ತು ಚಕ್ರದ ಲಾರಿಯ ಎದುರುಬದುರಾಗಿ ಒಂದು ಸೈಡ್ಗೆ ಡಿಕ್ಕಿಯಾಗಿವೆ.
ಕೆಎಸ್ಆರ್ಟಿಸಿ ಬಸ್
ಬೆಂಗಳೂರು ಬಸ್ ತೀರ್ಥಹಳ್ಳಿ ಮೂಲಕ ಹುಂಚಕ್ಕೆ ಹೋಗುತ್ತಿತ್ತು. ಈ ವೇಳೆ ಘಟನೆ ಸಂಭವಿಸಿದೆ. ಅತ್ತ ಲಾರಿಯ ಮೂಲ ಸ್ಪಷ್ಟವಾಗಿಲ್ಲ. ಅಪಘಾತದಲ್ಲಿ ಬಸ್ನ ಒಂದು ಬಾಗ ಜಖಂಗೊಂಡಿದೆ. ಲಾರಿಯ ಬಾಡಿ ಸಹ ಡ್ಯಾಮೇಜ್ ಆಗಿದೆ. ದಟ್ಟ ಮಂಜಿನ ಕಾರಣಕ್ಕೆ ಎದುರಿನ ದಾರಿ ಸ್ಪಷ್ಟವಾಗದೇ ಈ ಘಟನೆ ಸಂಭವಿಸಿರಬಹುದು ಎಂದು ಹೇಳಲಾಗುತ್ತಿದೆ. ಅದೃಷ್ಟಕ್ಕೆ ಇಲ್ಲಿ ಯಾರಿಗೂ ಏನೂ ಸಹ ಆಗಿಲ್ಲ.
