ಸಾರ್ವಜನಿಕರಿಗೆ ಸೂಚನೆ | ಡಿ.13 ರವರೆಗೆ 6 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್| ಯಾವ್ಯಾವ ಜಿಲ್ಲೆಗಳಲ್ಲಿ ಯಾವಾಗ ಮಳೆಯಾಗಲಿದೆ ಎಂಬ ವಿವರ ಇಲ್ಲಿದೆ
ದಕ್ಷಿಣ ಒಳನಾಡಿನಲ್ಲಿ ಇದೇ ಒಂಬತ್ತರಿಂದ 13 ನೇ ತಾರೀಖಿನವರೆಗು ಮಳೆಯಾಗುವ ಸೂಚನೆ ನೀಡಿದ್ದು, ಅದೇ ರೀತಿಯಲ್ಲಿ ಉತ್ತರ ಒಳನಾಡಿನಲ್ಲಿಯು ಇದೇ 11 ರಿಂದ 13 ನೇ ತಾರೀಖಿನವರೆಗು ಮಳೆಯಾಗುವ ಸೂಚನೆ ನೀಡಿದೆ.
ಬೆಂಗಳೂರು: ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಮಾಂಡೌಸ್ ಚಂಡ ಮಾರುತದಿಂದ (mandous cyclone karnataka) ಉತ್ತರ ಕರಾವಳಿ ತಮಿಳುನಾಡು, ಪುದುಚೇರಿಯಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯು. ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಕೊಡಗು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಹಳದಿ ಅಲರ್ಟ್ ಘೋಷಿಸಿದೆ.
ಇದನ್ನು ಸಹ ಓದಿ : ಪತಿ ಎದುರೇ ನಡೀತು ಪತ್ನಿಯ ಕಿಡ್ನ್ಯಾಪ್/ ಇಟ್ಟುಕೊಂಡವನೇ ಮಾಡಿದ್ದ ಅಪಹರಣ/ ಸ್ಟೇಷನ್ ಮಟ್ಟಿಲೇರಿತು ಇಬ್ಬರು ಪುರುಷರ ಜೊತೆಗಿನ ಸಂಸಾರ ಕದನ
ಮಾಂಡೌಸ್ ಚಂಡಮಾರುತ ಬಂಗಾಳಕೊಲ್ಲಿಗೆ ಅಪ್ಪಳಿಸುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ಕೆಲವು ದಿನಗ ರಾಜ್ಯದ ಹಲವೆಡೆ ಮಳೆಯಾಗಲಿದೆ. ಭಾರತೀಯ ಹವಾಮಾನ ಇಲಾಖೆಯ (india meteorological department) ಪ್ರಕಾರ, ಕರ್ನಾಟಕದಲ್ಲಿ ಚಂಡಮಾರುತದ ದೆಸೆಯಿಂದ (64.5 ಮಿ.ಮೀ-115.5 ಮಿ.ಮ) ನಷ್ಟು ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ ಇವತ್ತಿನಿಂದಲೇ ಬರುವ ಭಾನುವಾರದ ವರೆಗು ಭಾರೀ ಮಳೆಯಾಗುವ ಸೂಚನೆಯನ್ನ ಹವಾಮಾನ ಇಲಾಖೆ ನೀಡಿದೆ. ಈ ಕಾರಣಕ್ಕೇನೆ, ಹವಾಮಾನ ಇಲಾಖೆಯು ಹಲವು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಿದೆ.
ಇದನ್ನುಸಹ ಓದಿ : ರಾಜ್ಯ ಸಚಿವ ಸಂಪುಟದಲ್ಲಿ ತೀರ್ಥಹಳ್ಳಿಗೆ 75 ಕೋಟಿಯ ಕಾಮಗಾರಿ ಸ್ಯಾಂಕ್ಷನ್/ ಎರಡು ಸೇತುವೆ ನಿರ್ಮಾಣಕ್ಕೆ ಅಸ್ತು
ದಕ್ಷಿಣ ಒಳನಾಡಿನಲ್ಲಿ ಇದೇ ಒಂಬತ್ತರಿಂದ 13 ನೇ ತಾರೀಖಿನವರೆಗು ಮಳೆಯಾಗುವ ಸೂಚನೆ ನೀಡಿದ್ದು, ಅದೇ ರೀತಿಯಲ್ಲಿ ಉತ್ತರ ಒಳನಾಡಿನಲ್ಲಿಯು ಇದೇ 11 ರಿಂದ 13 ನೇ ತಾರೀಖಿನವರೆಗು ಮಳೆಯಾಗುವ ಸೂಚನೆ ನೀಡಿದೆ.
ಇದನ್ನು ಸಹ ಓದಿ : ದೇಶದ ಅತಿದೊಡ್ಡ ಸೆಕ್ಸ್ ರಾಕೆಟ್ ಬಯಲು/ 14 ಸಾವಿರಕ್ಕೂ ಹೆಚ್ಚು ಮಹಿಳೆಯರ ರಕ್ಷಣೆ/
ಎಲ್ಲೆಲ್ಲಿ ಮಳೆಯ ಸೂಚನೆ
ಡಿಸೆಂಬರ್ 10, ಶನಿವಾರ, : ಚಿಕ್ಕಬಳ್ಳಾಪುರ, ಕೋಲಾರ ಮತ್ತು ರಾಮನಗರ
ಡಿಸೆಂಬರ್ 11, ಭಾನುವಾರ: ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು
ಡಿಸೆಂಬರ್ 12, ಸೋಮವಾರ, : ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು
ಇನ್ನಷ್ಟು ಸುದ್ದಿಗಳಿಗಾಗಿ : ನಮ್ಮ ವಾಟ್ಸ್ಯಾಪ್ ಗ್ರೂಪ್ಗೆ ಕ್ಲಿಕ್ ಮಾಡಿ : Whatsapp link