BREAKING NEWS / ಶಿವಮೊಗ್ಗದ ಆಲ್ಕೋಳ ಸಮೀಪ ಎರಡು ಗುಂಪುಗಳ ಮಾರಾಮಾರಿ! ಐವರಿಗೆ ಇರಿತ! ಮೆಗ್ಗಾನ್ಗೆ ದಾಖಲು
Yesterday there was a fight between two groups near Alkola in Shimoga and the police have registered a case in this connectionಶಿವಮೊಗ್ಗದ ಆಲ್ಕೊಳ ಸಮೀಪ ನಿನ್ನೆ ಎರಡು ಗುಂಪುಗಳ ನಡುವೆ ಜಗಳವಾಗಿದ್ದು, ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ

KARNATAKA NEWS/ ONLINE / Malenadu today/ Sep 22, 2023 SHIVAMOGGA NEWS’
ಶಿವಮೊಗ್ಗ ನಗರದ ಆಲ್ಕೋಳ ಸರ್ಕಲ್ ಸಮೀಪ ಎರಡು ಗುಂಪುಗಳ ನಡುವೆ ಮಾರಾಮಾರಿಯಾಗಿದೆ.
ಆಲ್ಕೋಳ ಸಮೀಪ ಇರುವ ವಿಶಾಲ್ ಮಾರ್ಟ್ ಬಳಿಯಲ್ಲಿ ಎಲ್ಐಸಿ ಆಫೀಸ್ ಹಿಂಭಾಗದಲ್ಲಿ ಎರಡು ಗುಂಪುಗಳು ಪರಸ್ಪರ ಮಾರಾಮಾರಿಯಾಗಿದೆ. ಘಟನೆಯಲ್ಲಿ ಐದು ಮಂದಿಗೆ ಚಾಕುವಿಗೆ ಇರಿಯಲಾಗಿದೆ ಒಬ್ಬರ ಸೀರಿಯಸ್ ಇದ್ದಾರೆ, ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾಗಿದೆ.
ಈ ಭಾಗದಲ್ಲಿರುವ ಪವನ್ ಮತ್ತು ಕಿರಣ್ ಎಂಬಿಬ್ಬರು ಸ್ನೇಹಿತರಾಗಿದ್ದು, ಇವರ ನಡುವೆ ಕಳೆದ 2 ವರ್ಷಗಳಿಂದ ಸಣ್ಣಪುಟ್ಟ ವಿಚಾರಕ್ಕೆ ಬಿನ್ನಾಭಿಪ್ರಾಯಗಳಿದ್ದವು. ಅಲ್ಲದೆ ಇದೇ ಕಾರಣಕ್ಕೆ ಕಿರಿಕ್ ಆಗುತ್ತಿತ್ತು. ಈ ಮಧ್ಯೆ ನಿನ್ನೆ ರಾತ್ರಿ ನೇತಾಜಿ ಸರ್ಕಲ್ನಲ್ಲಿ ಇದೇ ವಿಚಾರಕ್ಕೆ ಕಿರಿಕ್ ಆಗಿದೆ.
ನೇತಾಜಿ ಸರ್ಕಲ್ನಲ್ಲಿ ನಡೆದ ಜಗಳದ ಬೆನ್ನಲ್ಲಿಯೇ ಪವನ್ ಆ್ಯಂಡ್ ಟೀಂ ವಿಶಾಲ್ ಮಾರ್ಟ್ ಸಮೀಪವಿದ್ದ ಕಿರಣ್ ಆ್ಯಂಡ್ ಗ್ಯಾಂಗ್ ಮೇಲೆ ಅಟ್ಯಾಕ್ ಮಾಡಿದೆ. ಈ ವೇಳೆ ಕಿರಣ್ ಗ್ಯಾಂಗ್ನ ಐವರಿಗೆ ಗಾಯಗಳಾಗಿದೆ. ಐವರಿಗೆ ಇರಿತವಾಗಿದ್ದು, ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಅಪಾಯವಿಲ್ಲವೆಂದು ವೈದ್ಯರು ಹೇಳಿದ್ದಾರೆ.
ಇನ್ನೂ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪವನ್ ಹಾಗೂ ಆತನ ಗ್ಯಾಂಗ್ನಲ್ಲಿದ್ದು ದಾಳಿ ಮಾಡಿದ ಆರೋಪಿಗಳಿಗಾಗಿ ಹುಡುಕಾಟ ನಡೆಸ್ತಿದ್ದಾರೆ.
ಇನ್ನಷ್ಟು ಸುದ್ದಿಗಳು
-
ಹಬ್ಬದ ದಿನ ತವರು ಮನೆಯಿಂದ ಗಂಡನ ಮನೆಗೆ ಹೋದ ಬೆನ್ನಲ್ಲೆ ಯುವತಿ ಸಾವು! ಮದುವೆಯಾಗಿ ಏಳು ತಿಂಗಳಿನಲ್ಲಿ ನಡೆದಿದ್ದೇನು?
-
ಚೈತ್ರಾ ಕುಂದಾಪುರ ವಿರುದ್ಧ ಟಿಕೆಟ್ ಡೀಲ್ ಕೇಸ್/ ಶಿವಮೊಗ್ಗ ನಗರದಲ್ಲಿ ಆರೋಪಿ ಮಹಜರ್! ಯಾರೆಲ್ಲಾ ಬಂದಿದ್ರು!?