ತುಮಕೂರಿನಿಂದ ಭದ್ರಾವತಿಗೆ ಬಂದಿದ್ದ ಯುವಕ ಭದ್ರಾನದಿಯಲ್ಲಿ ಮುಳುಗಿ ಸಾವು!
Young man from Tumkur drowns in Bhadra river
KARNATAKA NEWS/ ONLINE / Malenadu today/ Apr 25, 2023 GOOGLE NEWS
ಶಿವಮೊಗ್ಗ ಸೋದರ ಮಾವ ನಿಧನರಾದ ಹಿನ್ನೆಲೆಯಲ್ಲಿ ತುಮಕೂರಿನಿಂದ ಭದ್ರಾವತಿಗೆ ಬಂದಿದ್ದ ಯುವಕನೊಬ್ಬ ಭದ್ರಾ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ.
ಓದಿ / ಡಿಪ್ಲೋಮೋ ಕೋರ್ಸ್ಗೆ ಅರ್ಜಿ ಆಹ್ವಾನ/ ತರಬೇತಿ ಬಳಿಕ 100 % ಉದ್ಯೋಗಾವಕಾಶ/ ವಿವರ ಇಲ್ಲಿದೆ
ಏನಾಯ್ತು?
15 ದಿನಗಳ ಹಿಂದೆ ತನ್ನ ಸೋದರ ಮಾವ ನಿಧನರಾದ ಕಾರಣ ಭಧ್ರಾವತಿ ನಗರದ ಖಾಜಿ ಮೊಹಲ್ಲಾದಲ್ಲಿರುವ ಅಜ್ಜಿ ಮನೆಗೆ ಸಮೀರ್ ಎಂಬಾತ ಬಂದಿದ್ದ.
ಓದಿ / ಶಿವಮೊಗ್ಗದ ರಸ್ತೆಗಳಲ್ಲಿ ಯುವಕನ ಬೈಕ್ ಸ್ಟಂಟ್/ ಸೈಲೆಂಟ್ ಆಗಿ ಪುಂಡರಿಗೆ ವಾರ್ನಿಂಗ್ ಕೊಟ್ಟ ಪೊಲೀಸ್
ಹಬ್ಬ ಮುಗಿಸಿ ಊರಿಗೆ ಹೋಗಲು ಅಣಿಯಾಗಿದ್ದ
ರಂಜಾನ್ ಹಬ್ಬ ಮುಗಿಸಿಕೊಂಡು ಊರಿಗೆ ಹೋಗುವಂತೆ ಮನೆಯವರೆಲ್ಲ ಹೇಳಿದ್ದರಿಂದ ಇಲ್ಲಿಯೇ ಉಳಿದುಕೊಂಡಿದ್ದ.
ಓದಿ / ಶಿವಮೊಗ್ಗದಲ್ಲಿ ಬಸ್ ಹತ್ತಿದ ಎಸ್ಪಿ ಮಿಥುನ್ ಕುಮಾರ್, ಡಿಸಿ ಡಾ.ಆರ್ ಸೆಲ್ವಮಣಿ! ವಿವರ ಇಲ್ಲಿದೆ
ನಿನ್ನೆ ಮಧ್ಯಾಹ್ನ 3.40ಕ್ಕೆ ಶಿವಮೊಗ್ಗದಿಂದ ಬೆಂಗಳೂರಿಗೆ ಹೋಗುವ ರೈಲಿನಲ್ಲಿ ತುಮಕೂರಿಗೆ ಪ್ರಯಾಣಿಸಬೇಕಿತ್ತು.
ಇದಕ್ಕೂ ಮೊದಲು ಬೆಳಗ್ಗೆ ಸ್ನೇಹಿತರೊಂದಿಗೆ ಮನೆಯ ಹತ್ತಿರವಿದ್ದ ಭದ್ರಾ ನದಿಗೆ ಈಜಲು ತೆರಳಿದ್ದಾನೆ. ಈ ವೇಳೇ, ನೀರಿನಲ್ಲಿ ನಿಯಂತ್ರಣ ಸಿಗದೇ ಮುಳುಗಿ ಸಾವನ್ನಪ್ಪಿದ್ದಾನೆ.
Malenadutoday.com Social media