ಶಿವಮೊಗ್ಗ : ಜಿಲ್ಲೆಯ ತಾಲ್ಲೂಕು ಒಂದರಲ್ಲಿ (ವೈಯಕ್ತಿಕ ವಿಚಾರ ಗೌಪ್ಯ) ಅಪ್ರಾಪ್ತೆಯೊಬ್ಬಳಿಗೆ ಸಂದೇಶ ಕಳುಹಿಸಿದ್ದಾನೆ ಎಂಬ ಆರೋಪದ ಹಿನ್ನೆಲೆಯಲ್ಲಿ ಯುವಕನೋರ್ವನ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಘಟನೆ ವರದಿಯಾಗಿದೆ. ಯುವಕನ ಮೇಲೆ ನಾಲ್ಕೈದು ಮಂದಿ ಯುವಕರ ಗುಂಪು ನಡುರಸ್ತೆಯಲ್ಲಿಯೇ ಅಟ್ಟಾಡಿಸಿ ಹೊಡೆದಿರುವ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಘಟನೆಗೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲೆಯ ಸಂಬಂಧಿತ ಠಾಣೆಯ ಪೊಲೀಸರು ಕೇಸ್ ದಾಖಲಿಸಿದ್ದು ಮೂವರನ್ನು ಅರೆಸ್ಟ್ ಮಾಡಿದ್ದಾರೆ.
ರೈಲು ಪ್ರಯಾಣಿಕರ ಗಮನಕ್ಕೆ! ಶಿವಮೊಗ್ಗ-ಬೆಂಗಳೂರು ಜನಶತಾಬ್ದಿ ಸೇರಿ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
ಘಟನೆಯ ಹಿನ್ನೆಲೆಯನ್ನು ಗಮನಿಸಿದಾಗ, ಹಲ್ಲೆ ನಡೆಯುವ ಮೂರ್ನಾಲ್ಕು ದಿನಗಳ ಮೊದಲೇ ಅಪ್ರಾಪ್ತೆಯ ಕಡೆಯವರು ಹಲ್ಲೆಗೊಳಗಾದ ಯುವಕನ ತಂಟೆಗೆ ಬರದಂತೆ ಎಚ್ಚರಿಕೆ ನೀಡಿದ್ದರು ಎನ್ನಲಾಗಿದೆ. ಈ ಮಧ್ಯೆ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಬಳಸಿಕೊಂಡಿದ್ದರಿಂದ ಯುವಕನ ಮೇಲೆ ಹಲ್ಲೆಯಾಗಿದೆ ಎನ್ನಲಾಗುತ್ತಿದೆ. ಈ ಮಧ್ಯೆ ಸಂತ್ರಸ್ತ ಯುವಕನ ಕುಟುಂಬ ಆರೋಪಗಳನ್ನ ನಿರಾಕರಿಸಿದ್ದು ನಕಲಿ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹೀಗೆ ಮಾಡಲಾಗುತ್ತಿದೆ ಅದರಲ್ಲಿ ತಮ್ಮ ಯುವಕನ ಪಾತ್ರವಿಲ್ಲ ಎಂದು ಪೊಲೀಸರಿಗೆ ತಿಳಿಸಿದೆ. ಸದ್ಯ ಪೊಲೀಸರು ವಿಚಾರಣೆ ನಡೆಸ್ತಿದ್ದು, ಎರಡು ಕಡೆಯಿಂದಲೂ ದೂರು ಪಡೆದು ತನಿಖೆ ಆರಂಭಿಸಿದ್ದಾರೆ.

ನ್ಯೂ ಇಯರ್ ಪಾರ್ಟಿಗೆ ಎಸ್ಪಿ ಎಚ್ಚರಿಕೆ!! ನೀವಿರುವ ಜಾಗದಲ್ಲಿ 1 ಐಟಮ್ ಸಿಕ್ಕಿದ್ರೂ ಕೇಸ್ ಗ್ಯಾರಂಟಿ!
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel instagram youtube telegram google business malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!
ಭದ್ರಾವತಿ ಬಾಲಕಿಗೆ ಅಶ್ಲೀಲ ಸಂದೇಶ ಕಳುಹಿಸಿದ ಆರೋಪದ ಮೇಲೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ , Bhadravathi Youth brutally attacked over alleged obscene messages to minor girl
