ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯಲ್ಲಿ ನಡೆದ (Thirthahalli Jatre) ಎಳ್ಳಮಾವಾಸ್ಯೆ ಜಾತ್ರೆ ಮುಗಿಸಿಕೊಂಡು ಮನೆಗೆ ಹಿಂದಿರುಗುತ್ತಿದ್ದ ವೇಳೆ ಸಂಭವಿಸಿದ ಬೈಕ್ ಅಪಘಾತದಲ್ಲಿ ರಿಪ್ಪನ್ಪೇಟೆ ಸಮೀಪದ ಬಿಳಕಿ ಗ್ರಾಮದ ಯುವಕನೊಬ್ಬ ಸಾವನ್ನಪ್ಪಿದ್ದಾನೆ ಮತ್ತು ಈ ಘಟನೆಯಲ್ಲಿ ಇನ್ನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ.ಈ ಘಟನೆ ಕೋಣಂದೂರಿನ ಬಳಿ ಸಂಭವಿಸಿದೆ. ಬಿಳಕಿ ಗ್ರಾಮದ ನಿವಾಸಿ ಅವಿನಾಶ್ (25) ಸಾವನ್ನಪ್ಪಿದ್ದು, ಇದೇ ಬಿಳಕಿ ಗ್ರಾಮದ ನಿತ್ಯಾನಂದ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆತನ ಸ್ಥಿತಿ ಚಿಂತಾಜನಕವಾಗಿದೆ.

ಶಿವಮೊಗ್ಗದ ಭಾರತಿ ಕಾಲೋನಿಯ ನಿವಾಸಿ ಸಚಿನ್ ಪತ್ತೆಗೆ ಸಹಕರಿಸಿ: ಪೊಲೀಸ್ ಇಲಾಖೆಯ ಪ್ರಕಟಣೆ
ಅವಿನಾಶ್ ಮೂಲತಃ ಶಿವಮೊಗ್ಗ ತುಪ್ಪೂರು ಸಮೀಪದ ಸನ್ನಿವಾಸ ಗ್ರಾಮದ ಯೋಗೇಶ್ ಎಂಬುವವರ ಪುತ್ರ, ಬಿಳಕಿ ಗ್ರಾಮದಲ್ಲಿರುವ ತಮ್ಮ ದೊಡ್ಡಪ್ಪನ ಮನೆಯಲ್ಲಿ ವಾಸವಿದ್ದ. ಯುವಕರು ತೀರ್ಥಹಳ್ಳಿಯಲ್ಲಿ ಜಾತ್ರೆ ಮುಗಿಸಿಕೊಂಡು ಭಾನುವಾರ ತಡರಾತ್ರಿ ಬೈಕ್ನಲ್ಲಿ ಬರುತ್ತಿದ್ದರು. ಈ ಮಧ್ಯೆ ಕೋಣಂದೂರಿನ ಎನ್.ಆರ್.ಎಸ್ ಶಾಲೆಯ ಸಮೀಪದ ಟರ್ನಿಕ್ನಲ್ಲಿ ಬೈಕ್ ಕಂಟ್ರೋಲ್ಗೆ ಸಿಗದೆ, ಕರೆಂಟ್ ಕಂಬಕ್ಕೆ ಡಿಕ್ಕಿಯಾಗಿದೆ. ಈ ರಭಸಕ್ಕೆ ಬೈಕ್ನ ಹಿಂಬದಿಯಲ್ಲಿ ಕುಳಿತಿದ್ದ ಅವಿನಾಶ್ ತಲೆಗೆ ತೀವ್ರ ಪೆಟ್ಟಾಗಿ ಅಲ್ಲಿಯೇ ಸಾವನ್ನಪ್ಪಿದರು. ಇನ್ನೂ ಘಟನೆ ಕುರಿತು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ತುಮಕೂರಿನ ವ್ಯಕ್ತಿ ಶಿವಮೊಗ್ಗದಲ್ಲಿ ಸಾವು, ಈತನ ಬಗ್ಗೆ ತಿಳಿದಿದ್ದರೆ ಪೊಲೀಸರಿಗೆ ಮಾಹಿತಿ ನೀಡಿ
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel instagram youtube telegram google business malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!