SHIVAMOGGA NEWS TODAY

ಸೀಗೆಹಟ್ಟಿ / 22 ವರುಷದ ಯುವಕ ನೇಣಿಗೆ ಶರಣು, ಕಾರಣ ಹೀಗಿದೆ

ajjimane ganesh ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

Life in Shivamogga / ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಮನೆಯಲ್ಲೇ ನೇಣು ಬಿಗಿದುಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಸಿಗೇಹಟ್ಟಿ ಸಮೀಪದ ಕೆರೆದುರ್ಗಮ್ಮನ ಕೇರಿಯಲ್ಲಿ ಗುರುವಾರ ನಡೆದಿದೆ.

ಮೃತನನ್ನು ಭುವನ್ ಸಿಂಗ್ (22) ಎಂದು ಗುರುತಿಸಲಾಗಿದೆ. ಇವರು ನಗರದ ಸೆಂಟ್ರಲ್ ಲೈಬ್ರರಿಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದರು. ಕೆಲ ದಿನಗಳಿಂದ ತೀವ್ರ ಹೊಟ್ಟೆ ನೋವಿನ ಸಮಸ್ಯೆ ಬಳಲುತ್ತಿದ್ದರು ಎನ್ನಲಾಗಿದೆ. ಬಹುಶಃ ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅನುಮಾನಿಸಲಾಗಿದೆ. ಘಟನೆ ಬೆನ್ನಲ್ಲೆ ಕಾನೂನು ಪ್ರಕ್ರಿಯೆಗಳನ್ನು ಮುಗಿಸಿರುವ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
ajjimane ganesh

ಅಜ್ಜಮನೆ ಗಣೇಶ, ಪತ್ರಕರ್ತ, ಸಮಯ, ಟಿವಿ9, ನ್ಯೂಸ್​ ಫಸ್ಟ್​ನಲ್ಲಿ ವೃತ್ತಿ ನಿರ್ವಹಿಸಿರುವ ಅನುಭವವಿದೆ. ಗಳಿಸಿದ ಅನುಭವದ ಅನುಭಾವದ ಜೊತೆಗೆ ಮಲೆನಾಡು ಟುಡೆಯಲ್ಲಿ ಸೀನಿಯರ್​​ ಜರ್ನಲಿಸ್ಟ್​ ಆಗಿ ಕೆಲಸ ನಿರ್ವಹಿಸುತ್ತಿರುವೆ