ಮಲೆನಾಡು ಟುಡೆ ಸುದ್ದಿ / ರಿಪ್ಪನ್ಪೇಟೆ / ಯುವಕನೊಬ್ಬನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತನ ಗುರುತು ಸಹ ಪತ್ತೆಯಾಗಿದ್ದು 25 ವರ್ಷದ ಧನುಷ್ ಎನ್.ಎಸ್. ಎಂದು ಗುರುತಿಸಲಾಗಿದೆ. ಈತ ಕೆಲದಿನಗಳಿಂದ ನಾಪತ್ತೆಯಾಗಿದ್ದ, ಇದೀಗ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದಾನೆ.

ಶಿವಮೊಗ್ಗ: ಬೈಕ್ ಅಪಘಾತ ,ಬಿಟಿವಿ ವರದಿಗಾರ ಅನಿಲ್ ನಿಧನ
ರಿಪ್ಪನ್ಪೇಟೆ ಪೊಲೀಸ್ ಸ್ಟೇಷನ್ ಕೇಸ್, ಕುಂಸಿ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಘಟನೆ
ಮೃತ ಧನುಷ್ಅವರು ಕಳೆದ 19-01-2026 ರಂದು ತಮ್ಮ ಮನೆಯಿಂದ ಹೋದವನು ವಾಪಸ್ ಬಂದಿರಲಿಲ್ಲ. ಈ ಬಗ್ಗೆ ಎಲ್ಲೆಡೆ ಹುಡುಕಾಡಿದ್ದ ಮನೆಯವರು ರಿಪ್ಪನ್ಪೇಟೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದರು. ಆ ಬಳಿಕ ಪೊಲೀಸರು ಹಾಗು ಕುಟುಂಬಸ್ಥರು ಹುಡುಕಾಟ ನಡೆಸ್ತಿದ್ದರು. ಇದೀಗ ಐದನೇ ಮೈಲುಗಲ್ಲು ಬಳಿ ಯುವಕನ ಶವ ಪತ್ತೆಯಾಗಿದೆ. ಹೆಣ ಕೊಳತ ವಾಸನೆ ಗಮನಿಸಿದ ಸ್ಥಳೀಯರು ಸ್ಥಳಕ್ಕೆ ತೆರಳಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಪಂಚನಾಮೆ ಮುಗಿಸಿ ಮೃತದೇಹವನ್ನು ಪೋಸ್ಟ್ ಮಾರ್ಟಮ್ಗೆ ಕಳುಹಿಸಿದ್ದಾರೆ. ಇನ್ನೂ ಯುವಕನ ಸಾವಿಗೆ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಹಾಗೂ ತನಿಖೆಯನ್ನು ಕೈಗೊಂಡಿದ್ದಾರೆ.

ಶಿವಮೊಗ್ಗ: ಬೈಕ್ ಅಪಘಾತ ,ಬಿಟಿವಿ ವರದಿಗಾರ ಅನಿಲ್ ನಿಧನ
ಮಲೆನಾಡು ಟುಡೆ ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್ Facebook , whatsapp , whatsapp chanel instagram, youtube, telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್ಗಳನ್ನು ಕ್ಲಿಕ್ ಮಾಡಿ ಓದಬಹುದು.
youth who went missing was found dead in a hanging and decomposed state near the 5MS area. A case has been registered at Kumsi police station.
Related News
🔔 Breaking News Alerts
ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್ಸ್ಕ್ರೈಬ್ ಮಾಡಿ.