ಮಧು ಬಂಗಾರಪ್ಪರ ವಿರುದ್ಧ ಬಿಜೆಪಿ ಯುವ ಮೋರ್ಚಾ ಕಪ್ಪು ಪಟ್ಟಿ ಪ್ರದರ್ಶನ! ಜಿಲ್ಲಾ ಪಂಚಾಯತ್ ಸಭೆಯಲ್ಲಿ ಹಲ್​ಚಲ್​! ಧರಣಿನಿರತರನ್ನು ತಡೆದ ಎಸ್​ಪಿ

Yuva Morcha members enter Shivamogga Zilla Panchayat hall, stage dharna against Madhu Bangarappaಶಿವಮೊಗ್ಗ ಜಿಲ್ಲಾ ಪಂಚಾಯತ್​ ಸಭಾಂಗಣಕ್ಕೆ ಪ್ರವೇಶ ಮಾಡಿ ಪ್ರತಿಭಟನೆ ನಡೆಸಿದ ಯುವ ಮೋರ್ಚಾ ಸದಸ್ಯರು, ಮಧು ಬಂಗಾರಪ್ಪರ ವಿರುದ್ಧ ಧರಣಿ

ಮಧು ಬಂಗಾರಪ್ಪರ ವಿರುದ್ಧ ಬಿಜೆಪಿ ಯುವ ಮೋರ್ಚಾ ಕಪ್ಪು ಪಟ್ಟಿ ಪ್ರದರ್ಶನ! ಜಿಲ್ಲಾ ಪಂಚಾಯತ್ ಸಭೆಯಲ್ಲಿ ಹಲ್​ಚಲ್​!  ಧರಣಿನಿರತರನ್ನು ತಡೆದ ಎಸ್​ಪಿ

KARNATAKA NEWS/ ONLINE / Malenadu today/ Jul 26, 2023 SHIVAMOGGA NEWS   

ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಳೆ ಹಾನಿ ಸಂಬಂಧ ನಡೆಯುತ್ತಿದ್ದ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪರವರಿಗೆ ಕಪ್ಪು ಪಟ್ಟಿ ಪ್ರದರ್ಶನ ಮಾಡಿದ ಘಟನೆ ನಡೆದಿದೆ. 

ಜಿಲ್ಲಾ ಪಂಚಾಯತ್​ನಲ್ಲಿ ಸಭೆ ಆರಂಭವಾಗುತ್ತಲೇ , ಶಿಕ್ಷಣ ಸಚಿವ ಮಧು ಬಂಗಾರಪ್ಪರನವರ ವಿರುದ್ಧ ಘೋಷಣೆಗಳನ್ನು ಕೂಗುತ್ತ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸಭಾಂಗಣದ ಒಳಗೆ ಪ್ರವೇಶ ಮಾಡಿದರು, ವೇದಿಕೆಯ ಸಮೀಪದವರೆಗೂ ಘೋಷಣೆಗಳನ್ನು ಕೂಗುತ್ತಾ ಬಂದ ಪ್ರತಿಭಟನಾಕಾರರು, ಸಭೆಯಲ್ಲಿ ,ಕರಪತ್ರಗಳನ್ನು ಎಸೆದರು. ಅಲ್ಲದೆ ಕಪ್ಪು ಪಟ್ಟಿಗಳನ್ನು ಪ್ರದರ್ಶನ ಮಾಡಿ, ಸಚಿವರ ವಿರುದ್ಧ ಧಿಕ್ಕಾರ ಕೂಗಿದರು. 

ಬಿಜೆಪಿ ಯುವ ಮೋರ್ಚದ ಜಿಲ್ಲಾಧ್ಯಕ್ಷ ಹರಿಕೃಷ್ಣ, ಮತ್ತು ಕಾರ್ಯಕರ್ತರಾದ ಜಗದೀಶ್, ದರ್ಶನ್, ಪ್ರದೀಪ್ ವಿಶ್ವನಾಥ್ ಮೊದಲಾದವರು ಸಭೆಗೆ ಸಚಿವರು ಬರುತ್ತಿದ್ದಂತೆ ಪ್ರತಿಭಟನೆ ನಡೆಸಿದರು. ವೀರ ಸಾವರ್ಕರ್ ರವರ ಪಠ್ಯವನ್ನು ಶಾಲಾ ಪುಸ್ತಕಗಳಲ್ಲಿ ಕೈ ಬಿಟ್ಟಿರುವ ಹಿನ್ನೆಲೆಯಲ್ಲಿ ಯುವ ಮೋರ್ಚಾ ಈ ಪ್ರತಿಭಟನೆಯನ್ನು ನಡೆಸಿದೆ. 

ಭದ್ರತಾ ವೈಫಲ್ಯ! ಎಸ್​ಪಿ ಎಂಟ್ರಿ

ಸಚಿವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಏಕಾಯೇಕಿ ಸಭಾಂಗಣದ ಒಳಗೆ ಪ್ರವೇಶ ಮಾಡಿ ಪ್ರತಿಭಟನೆ ನಡೆಸಿದ್ದು, ನೆರೆದವರಿಗೆ ಇರುಸುಮುರುಸು ಉಂಟುಮಾಡಿತ್ತು. ಅಲ್ಲದೆ, ಸೂಕ್ತ ಭದ್ರತೆಯನ್ನು ಒದಗಿಸಿರಲಿಲ್ಲವೇ ಎಂಬ ಅನುಮಾನ ಮೂಡಿಸಿತ್ತು. ಇನ್ನೂ ಸ್ವತಃ ಎಸ್​ಪಿ ಮಿಥುನ್ ಕುಮಾರ್ ವೇದಿಕೆಯಿಂದ ಎದ್ದುಬಂದು ಪ್ರತಿಭಟನಾಕಾರರನ್ನು ಹೊರಕ್ಕೆ ತಳ್ಳಿದರು. ಇನ್ನೂ ಪ್ರತಿಭಟನಾಕಾರರು ಹೊರಕ್ಕೆ ಬರುತ್ತಲೇ ಪೊಲೀಸರು ಎಲ್ಲರನ್ನು ಎತ್ತಿಕೊಂಡು ಹೋಗಿ ಜೀಪ್​ನಲ್ಲಿ ಕೂರಿಸಿ ಕರೆದೊಯ್ದರು. 

ಶಿವಮೊಗ್ಗ ಸಿಟಿಯಲ್ಲಿ ಟ್ರಾಫಿಕ್ ಪೊಲೀಸರ ದಿಢೀರ್​ ಕಾರ್ಯಾಚರಣೆ! ಅರ್ಧಗಂಟೆಯಲ್ಲಿ ನೂರಕ್ಕೂ ಹೆಚ್ಚು ಹಾಫ್​ ಹೆಲ್ಮೆಟ್​ ಜಪ್ತಿ! ಕಾರಣವೇನು?

ಭದ್ರಾವತಿ ಮರ್ಡರ್ ಕೇಸ್! ರೌಡಿ ಮುಜ್ಜು ಹತ್ಯೆ ಪ್ರಕರಣದ ರಹಸ್ಯ ಭೇದಿಸಿದ ಶಿವಮೊಗ್ಗ ಪೊಲೀಸ್ ! ನಡೆದಿದ್ದೇನು? 


ನಡುರಸ್ತೆಯಲ್ಲಿ ಮಹಿಳೆಯ ಕೊಲೆ! ಸಾಬೀತಾಯ್ತು ಅಪರಾಧ! ಶಿಕಾರಿಪುರ ಗ್ರಾಮಾಂತರ ಠಾಣೆಯ ಕೇಸ್​ನಲ್ಲಿ ಕೋರ್ಟ್ ತೀರ್ಪು!

ಮಾಜಿ ಸಿಎಂ ಬಿಎಸ್​ವೈ ಇನ್ಮುಂದೆ ಡಾ.ಬಿಎಸ್​ ಯಡಿಯೂರಪ್ಪ! ಅಭಿಮಾನಿಗಳಿಗೂ ಅವಕಾಶ ನೀಡಿದ BYR

ಮಗ ಬೈಕ್​ ಓಡಿಸಿದ ತಪ್ಪಿಗೆ 25 ಸಾವಿರ ರೂಪಾಯಿ ದಂಡ ಕಟ್ಟಿದ ತಂದೆ! ಕಾರಣವೇನು ಗೊತ್ತಾ?

ವೈದ್ಯರೊಬ್ಬರ ಸಮಯ ಪ್ರಜ್ಞೆಯಿಂದ ಬಯಲಾಯ್ತು ದುಷ್ಕೃತ್ಯ! ಶಿವಮೊಗ್ಗ ಜಿಲ್ಲೆಯಲ್ಲಿ ದಾಖಲಾಯ್ತು ಮತ್ತೊಂದು ಪೋಕ್ಶೋ ಕೇಸ್!

 ​