ಯುವನಿಧಿ ಕಾರ್ಯಕ್ರಮ! ವಾಹನ ಸಂಚಾರದ ಮಾರ್ಗ ಬದಲಾವಣೆ! ಓಡಾಡುವ ದಾರಿಯ ವಿವರ ಇಲ್ಲಿದೆ!
Yuvanidhi Program! Here is the details of the change in the route of vehicular traffic
![ಯುವನಿಧಿ ಕಾರ್ಯಕ್ರಮ! ವಾಹನ ಸಂಚಾರದ ಮಾರ್ಗ ಬದಲಾವಣೆ! ಓಡಾಡುವ ದಾರಿಯ ವಿವರ ಇಲ್ಲಿದೆ!](https://malenadutoday.com/uploads/images/202401/image_870x_659e7d162cfa5.webp)
SHIVAMOGGA | Jan 10, 2024 | ಶಿವಮೊಗ್ಗದ ಫ್ರೀಡಂಪಾರ್ಕ್ನಲ್ಲಿ ನಡೆಯಲಿರುವ ಯುವನಿಧಿ ಯೋಜನೆ ಉದ್ಘಾಟನೆ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ರವರು ಆಗಮಿಸಲಿದ್ದಾರೆ.ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುಗಮ ಸಂಚಾರದ ದೃಷ್ಟಿಯಿಂದ ಪರ್ಯಾಯ ಮಾರ್ಗಗಳಿಗೆ ತಾತ್ಕಾಲಿಕ ಅಧಿಸೂಚನೆಯನ್ನು ಹೊರಡಿಸಲಾಗಿದೆ.
ಸಾರ್ವಜನಿಕ ವಾಹನಗಳ ಮಾರ್ಗ ಬದಲಾವಣೆ
( ದಿನಾಂಕ: 12-01-2024 ರಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 06-30 ಗಂಟೆಯವರೆಗೆ )
1) ಸಾಗರ ಕಡೆಯಿಂದ ತೀರ್ಥಹಳ್ಳಿ ಕಡೆಗೆ ಹೋಗುವ ಸಾರ್ವಜನಿಕ ವಾಹನಗಳು ಆಯ್ಯೋಳ ಸರ್ಕಲ್- ಗೋಪಾಳ ಸರ್ಕಲ್-ನ್ಯೂಮಂಡ್ಲಿ ಸರ್ಕಲ್ ಮಾರ್ಗವಾಗಿ ತೀರ್ಥಹಳ್ಳಿಗೆ ರಸ್ತೆಗೆ ಸೇರುವುದು.
2 ) ತೀರ್ಥಹಳ್ಳಿ ರಸ್ತೆ ಕಡೆಯಿಂದ ಸಾಗರ ರಸ್ತೆ ಕಡೆಗೆ ಹೋಗುವ ಸಾರ್ವಜನಿಕ ವಾಹನಗಳು ನ್ಯೂಮಂಡ್ಲಿ ಸರ್ಕಲ್ ಗೋಪಾಳ ಸರ್ಕಲ್ - ಆಯ್ಯೋಳ ಸರ್ಕಲ್ ಮಾರ್ಗವಾಗಿ ಸಾಗರ ರಸ್ತೆಗೆ ಬಂದು ಸೇರುವುದು.
3) ಶಿವಮೊಗ್ಗ ದಿಂದ ಶಿಕಾರಿಪುರ, ನ್ಯಾಮತಿ ಸೊರಬಾ ಕಡೆ ಹೋಗುವ ಎಲ್ಲಾ ವಾಹನಗಳು ಆಯನೂರು -ಹಾರಳ್ಳಿ-ಸವಳಂಗ ಮಾರ್ಗವಾಗಿ ಚಲಿಸುವುದು.
4) ಶಿಕಾರಿಪುರ ನ್ಯಾಮತಿ ಸೊರಬಾ ಕರೆಯಿಂದ ಶಿವಮೊಗ್ಗ ಕ್ಕೆ ಬರುವ ಎಲ್ಲಾ ವಾಹನಗಳು : - ಸವಳಂಗ ಹಾರಳ್ಳಿ ಆಯನೂರು ಮಾರ್ಗವಾಗಿ ಶಿವಮೊಗ್ಗ ಕ್ಕೆ ಬರುವುದು.
5) ಶಿವಮೊಗ್ಗ ನಗರದಿಂದ ಅಬ್ಬಲಗೆರೆ ಕೊಮ್ಮನಾಳ್ ಕುಂಚೇನಹಳ್ಳಿ ತಾಂಡ ಗಳಿಗೆ ಹೋಗುವ ಎಲ್ಲಾ ವಾಹನಗಳು :- ರಾಗಿಗುಡ್ಡ ಕುವೆಂಪು ನಗರದ ಮುಖಾಂತರ ಚಲಿಸುವುದು.
6) ಅಬ್ಬಲಗೆರೆ ಕೊಮ್ಮನಾಳ್ ಕುಂಚೇನಹಳ್ಳಿ ತಾಂಡ ಗಳಿಂದ ಶಿವಮೊಗ್ಗ ನಗರಕ್ಕೆ ಬರುವ ಎಲ್ಲಾ ವಾಹನಗಳು ಕುವೆಂಪು ನಗರ- ರಾಗಿಗುಡ್ಡ - ಸಂಗೋಳ್ಳಿ ರಾಯಣ್ಣ ಸರ್ಕಲ್ ಮುಖಾಂತರ ಚಲಿಸುವುದು ಎಂದು ಸೂಚಿಸಲಾಗಿದೆ.
ಇನ್ನೂ ಅಕ್ಕಪಕ್ಕದ ಜಿಲ್ಲೆಯವರು : ಸಿಎಂ ಕಾರ್ಯಕ್ರಮಕ್ಕೆ ಆಗಮಿಸುವವರಿಗಾಗಿ ಪಾರ್ಕಿಂಗ್ ವಿವರ & Google ರೂಟ್ ಮ್ಯಾಪ್ ಇಲ್ಲಿದೆ!